ಸುಸ್ವಾಗತ

ಕೆಳದಿ ಕವಿ ಮನೆತನದ ಒಂದು ವಿಸ್ತೃತ ದರ್ಶನಕ್ಕೆ ನಿಮಗೆಲ್ಲಾ ಆತ್ಮೀಯ ಸ್ವಾಗತ
- KAVI SURESH, SHIMOGA

Tuesday, November 15, 2011

ಶಿಕಾರಿಪುರದಲ್ಲಿ ಸಿರಿಗಟ್ಟಿದ ಸಂಭ್ರಮ


ಕವಿಮನೆತನದ ೫ನೆಯ ವಾರ್ಷಿಕ ಸಮಾವೇಶದ ಚುಟುಕು ವರದಿ
     ದಿ. ಶ್ರೀಮತಿ ವಿನೋದಮ್ಮ ಗೋಪಾಲರಾಯರ ನೆನಪಿನಲ್ಲಿ ಅವರ ಮಕ್ಕಳು ಸೋಮಶೇಖರ್, ರಾಮಮೂರ್ತಿ, ರಂಗನಾಥ ಮತ್ತು ಕಾಶೀಬಾಯಿ ಹಾಗೂ ಅವರ ಕುಟುಂಬ ವರ್ಗದವರು ದಿನಾಂಕ ೨೬-೧೨-೨೦೧೦ರಂದು ಶಿಕಾರಿಪುರದಲ್ಲಿ ಕೆಳದಿ ಕವಿಮನೆತನದ ಮತ್ತು ಬಂಧು-ಬಳಗದವರ ೫ನೆಯ ವಾರ್ಷಿಕ ಸಮಾವೇಶದ ಆಯೋಜಕರಾಗಿ ಕವಿ ಸುರೇಶರ ಸಲಹೆ, ಸೂಚನೆಗಳನ್ನು ಪಡೆದು ಉತ್ತಮ ವ್ಯವಸ್ಥೆ ಮಾಡಿದ್ದರು. ಕವಿ ಕುಟುಂಬಗಳು, ಬಂಧುಗಳು ಪುನರ್ಮಿಲನಗೊಂಡ ಹಾದಿ, ಕವಿಕಿರಣ ಪತ್ರಿಕೆಯ ವಿಶೇಷತೆ, ಯುವಪೀಳಿಗೆ ಇಡಬೇಕಾದ ಹೆಜ್ಜೆಗಳನ್ನೊಳಗೊಂಡಂತೆ ವಿಚಾರ ಮಂಡಿಸಿದವರು ಕವಿನಾಗರಾಜ್. ಇಂತಹ ಕಾರ್ಯಕ್ರಮ ಅನುಕರಣೀಯವೆಂದವರು ಮುಖ್ಯ ಅತಿಥಿ ಶ್ರೀ ಹರಿಹರಪುರ ಶ್ರೀಧರ್. ವಯೋವೃದ್ಧರೂ, ಮಾರ್ಗದರ್ಶಿಗಳಾದ ಶ್ರೀ ಎಸ್.ಕೆ. ಕೃಷ್ಣಮೂರ್ತಿಯವರನ್ನು ಆತ್ಮೀಯವಾಗಿ ಸನ್ಮಾನಿಸಲಾಯಿತು. ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆಗಳು ಅದೇ ದಿನ ಇದ್ದರೂ ಸಹ ಬಿಡುವು ಮಾಡಿಕೊಂಡು ಸಮಾರಂಭದಲ್ಲಿ ಹಾಜರಾಗಿ ಕುಟುಂಬ ಮಿಲನದ ಮಹತ್ವ  ತಿಳಿಸಿದವರು ಮಲೆನಾಡು ಅಭಿವೃದ್ಧಿ ಮಂಡಲಿಯ ಅಧ್ಯಕ್ಷ ಶ್ರೀ ಪದ್ಮನಾಭ ಭಟ್ಟರು. ಆಶುಭಾಷಣ ಸ್ಪರ್ಧೆ, ಸಾಂಸ್ಕೃತಿಕ ಕಾರ್ಯಕ್ರಮಗಳು ಮನಸೆಳೆದವು. ಆಯೋಜಕರಿಗೆ ಅಭಿನಂದನೆ, ವಂದನಾರ್ಪಣೆಗಳೊಂದಿಗೆ ಸಮಾವೇಶ ಸಂಪನ್ನಗೊಂಡಿತು. ಕೆಲವು ಚಿತ್ರಗಳು ತಮ್ಮ ಮಾಹಿತಿಗೆ:












     ೬ನೆಯ ವಾರ್ಷಿಕ ಸಮಾವೇಶ ದಿನಾಂಕ ೨೫-೧೨-೨೦೧೧ರಂದು ಹಾಸನದಲ್ಲಿ ನಡೆಯಲಿದೆ. ಕವಿಮನೆತನದ ಎಲ್ಲಾ ಕುಟುಂಬಗಳ ಎಲ್ಲಾ ಸದಸ್ಯರುಗಳು, ಬಂಧುಗಳು, ಹಿತೈಷಿಗಳು ತಪ್ಪದೆ ಕ್ರಿಯಾತ್ಮಕವಾಗಿ ಪಾಲುಗೊಂಡು ಸಮರಸತೆಯ ಕೊಂಡಿಗಳನ್ನು ಭದ್ರಪಡಿಸಲು ಕೋರಲಾಗಿದೆ.
*******************
ಹಿಂದಿನ ಲೇಖನಕ್ಕೆ ಲಿಂಕ್: ತೀರ್ಥಹಳ್ಳಿಯಲ್ಲಿ ನಡೆದ ಕೆಳದಿ ಕವಿಮನೆತನದ ಬಂಧು-ಬಳಗದವರ ನಾಲ್ಕನೆಯ ಸಮಾವೇಶ : http://kavimana.blogspot.com/2011/11/blog-post_05.html

Saturday, November 5, 2011

ದಿ.ಎಸ್.ಕೆ. ನಾರಾಯಣರಾಯರ ನೆನಪು

     ದಿ.ಶ್ರೀ ಎಸ್.ಕೆ.ನಾರಾಯಣರಾಯರು ಸಂಬಂಧದಲ್ಲಿ ನಮಗೆ ಚಿಕ್ಕಜ್ಜ ಆಗಬೇಕು.  (ನಮ್ಮ ಮುತ್ತ ಜ್ಜ  ಕವಿವೆಂಕಣ್ಣಯ್ಯನವರ ತಮ್ಮ ಸಾ.ಕ.ಲಿಂಗಣ್ಣಯ್ಯನವರ ಹಿರಿಯ ಮಗ). ಅವರು ಒಳ್ಳೆಯ ವೀಣಾ ವಿದ್ವಾಂಸರು. ಅವರು ನುಡಿಸುತ್ತಿದ್ದ ವೀಣೆಯ ವಿಶೇಷವೆಂದರೆ ಇಡೀ ವೀಣೆ ಒಂದೇ ಮರದಿಂದ ಮಾಡಿದ್ದಾಗಿತ್ತು. ಅಪರೂಪದ ಅಂತಹ ವೀಣೆ ನೋಡಲೂ ಸಿಗುವುದು ಕಷ್ಟ. ಅವರ ಮೊಮ್ಮಗ ಬೆಂಗಳೂರಿನ ಶ್ರೀ ಸತೀಶಕುಮಾರ್ ಕಳಿಸಿಕೊಟ್ಟಿರುವ ಅಪರೂಪದ ಚಿತ್ರಗಳನ್ನು ಇಲ್ಲಿ ಪ್ರಕಟಿಸಿದೆ. ಶ್ರೀ ನಾರಾಯಣರಾಯರ ಕುರಿತು ಲೇಖನ ಮುಂದಿನ 'ಕವಿಕಿರಣ' ಸಂಚಿಕೆಯಲ್ಲಿ ಪ್ರಕಟವಾಗಲಿದೆ. 
ಪತ್ನಿ ದಿ. ಶ್ರೀಮತಿ ವರಲಕ್ಷ್ಮಮ್ಮನವರೊಂದಿಗೆ