ಸುಸ್ವಾಗತ

ಕೆಳದಿ ಕವಿ ಮನೆತನದ ಒಂದು ವಿಸ್ತೃತ ದರ್ಶನಕ್ಕೆ ನಿಮಗೆಲ್ಲಾ ಆತ್ಮೀಯ ಸ್ವಾಗತ
- KAVI SURESH, SHIMOGA

Wednesday, August 29, 2012


Rare Photos pertaining to Keladi/Kavi Family - ಈ ಲೇಬಲ್ ನ ಅಡಿಯಲ್ಲಿ ಕೆಲವು ದಾಖಲೆಗಳನನ್ನು ಇಲ್ಲಿ ನೀಡಿದೆ.

ಹಳೆಯ ದಾಖಲೆಗಳನ್ನು, ಅಪರೂಪದ ಬರಹಗಳನ್ನು, ಕೆಳದಿ ಕವಿ ಕುಟುಂಬಕ್ಕೆ ಸಂಬಂಧಿಸಿದ ಕುತೂಹಲವಾದ ಸಂಕ್ಷಿಪ್ತ/ದಾಖಲೆ/ಫೋಟೋಗಳನ್ನು ಇದರಲ್ಲಿ  ಸೇರಿಸಬಹುದು. ಈ ಗಾಗಲೇ ಈ ಬ್ಲಾಗ್ಗೆ ಸೇರಿದವರು ನೇರವಾಗಿ ಇದನ್ನು ಸೇರಿಸಬಹುದು. ಬ್ಲಾಗ್ ಸೇರಲು ಇಚ್ಛೆ ಇರುವವರು  ನನಗೆ ತಿಳಿಸಿದರೆ ನಾನು blog ಸೇರಲು invite  ಕಳಿಸುವೆ. ಮಾಹಿತಿಯನ್ನು ನನ್ನ e-mail: bsr_kavisuresh@yahoo.co.in ಗೆ ಕಳಿಸಿದರೂ ನಾನು ಅದನ್ನು ಇದರಲ್ಲಿ ಸೇರಿಸುವೆ.ದಿವಂಗತರ/ಹಿರಿಯರ ಎಲ್ಲ ಹಸ್ತಾಕ್ಷರಗಳನ್ನೂ ಇದರಲ್ಲಿ ಸೇರಿಸಲು ಉದ್ದೇಶಿಸಿದೆ. ನಿಮ್ಮ ಕುಟುಂಬದ ಅಪರೂಪದ ದಾಖಲೆಗಳು ಮುಂದಿನ ಪೀಳಿಗೆಗೆ ಸಾಕಷ್ಟು ಉಪಯೋಗಕಾರಿಯಾದೀತು.

 ನಿಮ್ಮ ಸಹಕಾರ ಎಂದಿನಂತಿರಲಿ.



 ಕವಿ ವೆಂ. ಸುರೇಶ್





ಹಳೆ ಬೇರು - 

ಹೊಸ ಚಿಗುರು











[ಹಳೇಬೀಡಜ್ಜಿ] ಎಂದೇ ಪ್ರಸಿದ್ಧರಾದ ಎಲ್ಲ ಹಳೇಬೀಡು ಕುಟುಂಬದ ಎಲ್ಲರಿಗೂ ವಾತ್ಸಲ್ಯ ಮತ್ತು ಮಮತೆಯನ್ನು ಧಾರೆಯೆರೆದ ದಿ. ಲಕ್ಮ್ಮಮ್ಮ ಸುಬ್ಬರಾವ್ ರವರೊಂದಿಗೆ ಕವಿ ಸುರೇಶ್ ಮತ್ತು ರೇಣುಕಾ ಸುರೇಶ್ ರವರ ಮಕ್ಕಳಾದ ದೀಪಕ್ ಮತ್ತು ಅಂಬಿಕಾ ರವರೊಂದಿಗೆ[ಸುಮಾರು 16-17 ವರ್ಷಗಳ ಹಿಂದಿನ ಫೋಟೋ] [ದಿ. ಲಕ್ಷ್ಮಮ್ಮನವರು  ನನ್ನ ತಾಯಿ ಶ್ರೀಮತಿ ಸೀತಮ್ಮ -   ರವರ ತಾಯಿ - ನನ್ನಜ್ಜಿ!] 
                           





                   



                           





ಒಂದು ಮನ ಮಿಡಿದ ಸಂದರ್ಭ...
ಈ ಭೇಟಿಯ ಸಂದರ್ಭದಲ್ಲಿ ನಾನು ಎಂದಿನಂತೆ ಹಣೆಯ ಮೇಲೆ ಗೋಪಿ-ಚಂದನವನ್ನಿಟ್ಟಿದ್ದೆ. ನನ್ನ ನೋಡಿದ ಕೂಡಲೇ ನಿಮ್ಮನ್ನು ನೋಡಿದರೆ ಕವಿ ಸುಬ್ರಹ್ಮಣ್ಯನವರನ್ನು ನೋಡಿದಂತೆ ಆಗುತ್ತದೆ  ಎಂದಾಗ (ಟಿಪ್ಪಣಿ) ಮೂಲಕ ಅವರ ಆತ್ಮೀಯತೆ ಬಗ್ಗೆ, ಪೂರ್ವಜರ ಬಗ್ಗೆ ಗೌರವದ ಬಗ್ಗೆ ಕಂಡು ನಾನು ಬೆರಗಾದೆ. 










                      LATE  S.K.LINGANNAIYA [1879 - 1943]







  [Late Janakamma w/o late
   SK Lingannaiaya)   [Not in this picture]                                   Late Mookamma [Sri Gunda jois's mother]
























                    Late Smt.Saraswathamma






Late SK Narayana Rao

Smt.Janakamma s/o Gundajois               late Mookamma                                
       

  SP Vinay (S/o
                                                                                              Sri SK Prakash with            (d/o Sri SK
                                                                                                                 SK Gopinath)


                                      


                                 LATE SK Lingannaiya in front of the then ATTARA KACHERI



Sri LK Lingannaiya's family - more details to follow

Tuesday, August 21, 2012

KELADI SHIVAPPA NAYAKA - Photo courtesy: Dr. S. Hanumantha Jois, Shimoga (taken from the Keladi Museum

Saturday, June 9, 2012

One more request....

This blog is being followed by many persons as could be seen from the number of viewership. As we are all aware, this blog is focussing on matters pertaining to the Keladi Kavi Manetana and its achievements - in the past and present. The aim, in the process, is to encourage the young Kavi generation to understand the past and achieve new feats in the future. 


I had earlier sent invitations to many of our Kavi family members to join the blog and enrich the same with whatever information they have; including the achievements of their own family. I am grateful to many who have responded to this invitation and joined the blog; many of them are actively participating. 


I once again request that anyone of the Kavi family members who are eager to join this blog, may send in their intention to my e-mail ID : bsr_kavisuresh@yahoo.co.in. I will send a formal invitation to join. Rare photographs, documents and other matters within your knowledge may also be uploaded here so that we come to know each other much better.


Looking forward to your quick and positive response.


                                                                          KAVI SURESH

Wednesday, May 2, 2012

Release of "Jeevana Darpana" Book of Sri Kavi Suresh and Violin CD of Dr.BSR Deepak and Vocal CD of Kum.BSR Ambika

On 29-4-2012, a book titled, "Jeevana Darpana" (a collection of articles in Kannada) written by Sri Kavi Suresh and a Violin Audio CD, titled "Nada Tarangini" (a few famous kritis of Purandara Dasa) played by Vidwan Dr.BSR Deepak and a Vocal Audio CD titled "Ramarasayana Geeta" (devotional songs on Sri Veera Pratapa Anjaneya and Sri Sri Bindu Madhava Swamiji of Belaguru, Hosadurga Taluk) sung by Kum.BSR Ambika were released at a function in Shimoga. Dr.Manu Baligar, Commissioner for Kannada and Culture, Bangalore released the Book and Vidwan Sringeri HS Nagaraj of Shimoga released the audio CDs. Sri NK Narayana, Retd.Sr.KAS Officer, Bangalore was the Chief Guest and Prof.Diwakar Rao Nadiger, Director, Edurite Training College, Shimoga, presided over the function. Mridanga Vidwan Sri C.Cheluvaraj and his wife Smt.Taradevi were also felicitated on the occasion.

Release of "Jeevana Darpana" Book by Dr.Manu Baligar


Release of "Nadatarangini" violin audio CD of Vidwan Dr.BSR 
Deepak by Vidwan Sringeri HS Nagaraj


Release of "Ramarasaayana Geeta" vocal audio CD of
Kum BSR Ambika by Vidwan Sringeri HS Nagaraj



A view of the audience



Felicitation by Dr.Manu Baligar


Felicitation to Dr.Manu Baligar by Kavi
Suresh family


Felicitation of Kavi Suresh and Renuka Suresh
by Prof.Diwakar Rao and Smt.Geeta Diwakar


Felicitation of Mridanga Vidwan Sri C.Cheluvaraj and his
wife Smt.Tara Devi.

[full details and photos shortly]

Monday, February 13, 2012

ಕವಿಮನೆತನದ ಪತ್ರಿಕೆ 'ಕವಿಕಿರಣ'



     ಕೆಳದಿ ಸಂಸ್ಥಾನ ಕರ್ನಾಟಕದ ಹೆಮ್ಮೆಯ ರಾಜಮನೆತನವಾಗಿದ್ದು ಮೈಸೂರು ಅರಸರ ರಾಜ್ಯಕ್ಕಿಂತಲೂ ಹೆಚ್ಚಿನ ವಿಸ್ತಾರ ಹೊಂದಿತ್ತು.  ಕೆಳದಿ ಅರಸರು ನಾಡಿನ ಅಭಿವೃದ್ಧಿಯೊಂದಿಗೆ ಕಲೆ, ಸಾಹಿತ್ಯ, ಧಾರ್ಮಿಕ ಚಟುವಟಿಕೆಗಳಿಗೂ ಪ್ರೋತ್ಸಾಹ ನೀಡಿದ್ದು ಇತಿಹಾಸ. ನಮ್ಮ ಪೂರ್ವಜರು ಕೆಳದಿ ಸಂಸ್ಥಾನದ ಆಸ್ಥಾನ ಕವಿಗಳಾಗಿದ್ದು ಅವರ ಕೃತಿಗಳಿಂದಲೇ ಕೆಳದಿಯ ಇತಿಹಾಸ ದಾಖಲೆಯಾಗಿ ಉಳಿದಿರುವುದೂ ಸಹ ಇತಿಹಾಸ. ವಿಶೇಷವಾಗಿ ಕೆಳದಿನೃಪ ವಿಜಯ ಪ್ರಮುಖ ಐತಿಹಾಸಿಕ ಕೃತಿಯಾಗಿದ್ದು ಇದರ ರಚನಕಾರ ಕವಿಲಿಂಗಣ್ಣ ಕೆಳದಿ ಕವಿಮನೆತನದ ಮೂಲಪುರುಷ. ಇವನ ನಂತರದ ಪೀಳಿಗೆಯವರೂ ಸಹ ಪ್ರತಿಭಾಶಾಲಿಗಳಾಗಿದ್ದು ಅವರುಗಳ ಸಾಧನೆ ಈಗಿನವರಿಗೆ ಮಾದರಿಯಾಗಲಿ ಎಂಬ ಉದ್ದೇಶದಿಂದ ಅವರ ಕೃತಿಗಳನ್ನು ಬೆಳಕಿಗೆ ತರುವ, ಸಾಧನೆಗಳನ್ನು ಪರಿಚಯಿಸುವ ಕಾರ್ಯ ಮಾಡುವ ಸಲುವಾಗಿ ಹಾಗೂ ಕವಿಕುಟುಂಬಗಳ ಸಮಕಾಲೀನರೂ ಸಾಧಕರಾಗಲು ಪ್ರೇರಿಸುವ ಉದ್ದೇಶದಿಂದ ಒಂದು ಪತ್ರಿಕೆ ಹೊರತರುವ ವಿಚಾರ ನಮ್ಮಲ್ಲಿ ಮೊಳಕೆಯೊಡೆದಿತ್ತು. 
     ಕೆಳದಿಯಲ್ಲಿ ೨೦೦೭ರ ಡಿಸೆಂಬರಿನಲ್ಲಿ ನಡೆದ ಎರಡನೆಯ ವಾರ್ಷಿಕ ಸಮಾವೇಶದಲ್ಲಿ ಸಂವಹನಾ ಮಾಧ್ಯಮವಾಗಿ ಒಂದು ಪತ್ರಿಕೆಯನ್ನು ಹೊರತರಲು ನಿಶ್ಚಯಿಸಿ ಈ ಕೆಲಸಕ್ಕಾಗಿ ನನ್ನನ್ನು ಸಂಪಾದಕನನ್ನಾಗಿ ಮತ್ತು ಸೋದರ ಸುರೇಶನನ್ನು ಸಹಸಂಪಾದಕನನ್ನಾಗಿ ಆರಿಸಿದರು. ನನಗೂ ಈ ಕೆಲಸ ಮಾಡುವುದು ಪ್ರಿಯವಾಗಿತ್ತು. ನನ್ನೊಳಗಿದ್ದ ಬರಹಗಾರನಿಗೆ ಎಚ್ಚರವಾಗಿದ್ದು ಆಗಲೇ. ತಹಸೀಲ್ದಾರನಾಗಿ ನನಗಿದ್ದ ಕಾರ್ಯಬಾಹುಳ್ಯದಿಂದಾಗಿ ಹಾಗೂ ಮುಕ್ತವಾಗಿ ಅನಿಸಿಕೆಗಳನ್ನು ಸರ್ಕಾರಿ ನೌಕರನಾಗಿ ವ್ಯಕ್ತಪಡಿಸುವುದು ಸೂಕ್ತವಲ್ಲವಾಗಿದ್ದರಿಂದ ಬರವಣಿಗೆಗೆ ಆ ಮೊದಲು ಕೈ ಹಾಕಿರಲಿಲ್ಲ. ಕೆಲವೇ ದಿನಗಳಲ್ಲಿ ಅಸಿಸ್ಟೆಂಟ್ ಕಮಿಷನರ್ ಆಗಿ ಬಡ್ತಿ ಹೊಂದುವುದಿದ್ದರೂ ಸಹ ೨೦೦೯ರಲ್ಲಿ ಅನೇಕ ಕಾರಣಗಳಿಂದ ನಾನು ಸರ್ಕಾರಿ ಸೇವೆಯಿಂದ ಸ್ವ ಇಚ್ಛಾ ನಿವೃತ್ತಿ ಪಡೆದಿದ್ದು, ಅವುಗಳಲ್ಲಿ ಒಂದು ಕಾರಣ ಈ ಪತ್ರಿಕೆಯ ಕೆಲಸದಲ್ಲಿ ತೊಡಗಿಕೊಳ್ಳುವುದೂ ಆಗಿತ್ತು.
     ಸರ್ಕಾರಿ ಅಧಿಕಾರಿಯಾಗಿದ್ದರಿಂದ ಪತ್ರಿಕೆಯ ಸಂಪಾದಕನಾಗಿ ಕಾರ್ಯ ನಿರ್ವಹಿಸಲು ನಡತೆ ನಿಯಮಾವಳಿಗಳ ಪ್ರಕಾರ ಅನುಮತಿ ಕೋರಿ ಶಿವಮೊಗ್ಗ ಜಿಲ್ಲಾಧಿಕಾರಿಯವರ ಮೂಲಕ ಮನವಿ ಸಲ್ಲಿಸಿದೆ. (ಆ ಅವಧಿಯಲ್ಲಿ ನಾನು ಶಿವಮೊಗ್ಗದಲ್ಲಿ ಪುರಸಭಾ ತಹಸೀಲ್ದಾರ್ ಮತ್ತು ನಂತರ ಶಿಕಾರಿಪುರದಲ್ಲಿ ತಹಸೀಲ್ದಾರನಾಗಿದ್ದೆ). ನೂತನ ಪತ್ರಿಕೆಗೆ ಹಲವಾರು ಹೆಸರುಗಳು ಸೂಚಿಸಲ್ಪಟ್ಟಿದ್ದು ಅಂತಿಮವಾಗಿ ಕವಿಕಿರಣ ಎಂಬ ಹೆಸರನ್ನು ಇಡಬೇಕೆಂದು ಹಾಗೂ ಅರ್ಧವಾರ್ಷಿಕವಾಗಿ ಹೊರತರಬೇಕೆಂದು ತೀರ್ಮಾನಿಸಿದೆವು. ಜಿಲ್ಲಾ ದಂಡಾಧಿಕಾರಿಯವರ ಮೂಲಕ ಪತ್ರಿಕೆಯ ಶೀರ್ಷಿಕೆಯ ಪರಿಶೀಲನೆಗೆ ನವದೆಹಲಿಯ ವೃತ್ತಪತ್ರಿಕೆಗಳ  ರಿಜಿಸ್ಟ್ರಾರರಿಗೆ ಕಳಿಸಿಕೊಡಲಾಯಿತು. ಇದಕ್ಕೆ ಮುನ್ನ ನಿಯಮದಂತೆ ಪೋಲಿಸ್ ಇಲಾಖೆಯಿಂದ ನನ್ನ ಪೂರ್ವಾಪರ ವಿಚಾರಣೆ ನಡೆದು ಎಸ್.ಪಿ.ಯವರು ಪತ್ರಿಕೆ ಪ್ರಾರಂಭಕ್ಕೆ ಅನುಮತಿ ಸೂಚಿಸಿ ಪತ್ರ ಕೊಟ್ಟಿದ್ದರು. ಕವಿಕಿರಣ ಪತ್ರಿಕೆಯ ಶೀರ್ಷಿಕೆ ಲಭ್ಯವಿದ್ದ ಬಗ್ಗೆ ನವದೆಹಲಿಯ ರಿಜಿಸ್ಟ್ರಾರರ ಕಛೇರಿಯಿಂದ ಸೂಚನೆ ಬಂದ ನಂತರ ಅಗತ್ಯದ ಮುಚ್ಚಳಿಕೆಗಳನ್ನು ನಾನು ಮತ್ತು ನನ್ನ ತಮ್ಮ ಜಿಲ್ಲಾ ಅಪರ ದಂಡಾಧಿಕಾರಿಯವರಿಗೆ ಬರೆದುಕೊಟ್ಟೆವು. ಪತ್ರಿಕೆಗಳ ರಿಜಿಸ್ಟ್ರಾರರು ನಮ್ಮ ಪತ್ರಿಕೆಯನ್ನು ನೋಂದಾಯಿಸಿಕೊಂಡು ಪತ್ರಿಕೆಯ ನೋಂದಣಿ ಕ್ರಮಾಂಕ ಹಾಗೂ ಪ್ರಮಾಣ ಪತ್ರ ನೀಡಿದರು. ಪತ್ರಿಕೆ ಪ್ರಾರಂಭಕ್ಕೆ ಹಾದಿ ನಿಚ್ಚಳವಾಯಿತು. 
      ಹಿರಿಯರೊಡನೆ ಹಲವಾರು ಸಲ ಚರ್ಚಿಸಿ ಪತ್ರಿಕೆಯ ರೂಪುರೇಷೆ ನಿರ್ಧರಿಸಲಾಯಿತು. ಬೆಂಗಳೂರಿನಲ್ಲಿ ನಡೆದ ವಾರ್ಷಿಕ ಸಮಾವೇಶದಲ್ಲಿ ಪತ್ರಿಕೆಯ ಮೊದಲ ಸಂಚಿಕೆ ಹೊರಬಂದಿತು. ಒಂದು ಸಾರ್ಥಕ ಕೆಲಸ ಪ್ರಾರಂಭಿಸಿದ ಸಂತೋಷ ನಮ್ಮದಾಗಿತ್ತು. ಕವಿಕಿರಣಕ್ಕೆ ಶೃಂಗೇರಿಯ ಜಗದ್ಗುರುಗಳು, ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗ್ಗಡೆಯವರು, ರಾಮಚಂದ್ರಾಪುರ ಮಠದ ಶ್ರೀಗಳು ಸೇರಿದಂತೆ ಹಲವರು ಗುರುಹಿರಿಯರು ಆಶೀರ್ವದಿಸಿದ್ದಾರೆ; ಕ.ಸಾ.ಪ.ದ ರಾಜ್ಯಾಧ್ಯಕ್ಷ ಶ್ರೀ ನಲ್ಲೂರು ಪ್ರಸಾದ್ ಸೇರಿದಂತೆ ಹಲವರು ಗಣ್ಯರು ಶುಭ ಹಾರೈಸಿದ್ದಾರೆ; ಕುಟುಂಬಗಳ ಹಿರಿಯರ ಮಾರ್ಗದರ್ಶನವಿದೆ. ಉತ್ತಮ ಸಹಕಾರಿಗಳಿದ್ದಾರೆ.
     ಕವಿಕಿರಣದಲ್ಲಿ ಸುಮಧುರ ಬಾಂಧವ್ಯದ ಕನಸು ನನಸಾಗಿಸುವ ಸಹೃದಯತೆಯಿದೆ, ಹಿಂದಿನ ಸಾಧಕರನ್ನು ನೆನೆಯುವ ಕೃತಜ್ಞತೆಯಿದೆ, ಐತಿಹಾಸಿಕ ಸಂಗತಿಗಳನ್ನು ನೆನಪಿಸುವ ಕರ್ತವ್ಯವಿದೆ, ಈಗಿನವರಿಗೆ ಪ್ರೇರಣೆ ನೀಡುವ ಕಸುವಿದೆ, ಸಜ್ಜನ ಶಕ್ತಿಯನ್ನು ಜಾಗೃತಗೊಳಿಸುವ ಸಂಕಲ್ಪವಿದೆ. ಅಷ್ಟೇ ಅಲ್ಲ, ಇದು ಕವಿಮನೆತನದವರಿಗೆ ಹಾಗೂ ಬಂಧುಗಳಿಗೆ ಕುಟುಂಬದ ದಾಖಲೆಯಾಗಿದ್ದರೆ, ಕೆಳದಿಯ ಇತಿಹಾಸಾಸಕ್ತರಿಗೆ ಮಾಹಿತಿ ಕೊಡುವ ಸ್ರೋತವಾಗಿದೆ.  ಅಗಣಿತ ಅತ್ತಣ, ಇತ್ತಣ, ಸುತ್ತಣ, ಎತ್ತೆತ್ತಣದ ಕವಿಗಡಣದ ಸುಗುಣದಾಭರಣವಾಗಿ, ಗುಣವ ಪ್ರಧಾನವಾಗಿಸಿ, ಅವಗುಣವ ಗೌಣವಾಗಿಸಿ, ಬಣಗುಡುವ ದಣಿದ ಮನವ ತಣಿಪ ಹೊಂಗಿರಣವಾಗಿ, ಕವಿಮನೆತನದ ಆಶಾಕಿರಣವಾಗಿ ಕವಿಕಿರಣ ಚಿರಕಾಲ ಬೆಳಗಲಿ, ಸಹೃದಯರು ಬೆನ್ನಿಗಿರಲಿ ಎಂಬುದು ನಮ್ಮ ಸದಾಶಯ. ಒಂದು ವಿಶೇಷ ಪೂರಕ ಸಂಚಿಕೆ ಸೇರಿ ಈಗಾಗಲೇ ಎಂಟು ಅರ್ಧ ವಾರ್ಷಿಕ ಸಂಚಿಕೆಗಳು ಹೊರಬಂದಿವೆ. ಅಂತರ್ಜಾಲ ತಾಣದಲ್ಲೂ ಈ ಸಂಚಿಕೆಗಳನ್ನು ಓದಬಹುದು. ತಮ್ಮ ಮಾಹಿತಿಗಾಗಿ ಈ ಕೆಳಗೆ ಲಿಂಕ್ ಕೊಟ್ಟಿದೆ. ಆಸಕ್ತರು ಓದಿ ತಮ್ಮ ಅಮೂಲ್ಯ ಸಲಹೆಗಳನ್ನು ಕೊಡಬಹುದಾಗಿದೆ. ಕವಿಕಿರಣ ಪತ್ರಿಕೆಯಲ್ಲದೆ ಕವಿಪ್ರಕಾಶನದ ಎಲ್ಲಾ ಪ್ರಕಟಣೆಗಳನ್ನೂ ಕಾಲಕ್ರಮೇಣ ಈ ತಾಣದಲ್ಲಿ ಪ್ರಕಟಿಸುವ ಉದ್ದೇಶವಿದೆ. ಜಾಹಿರಾತು ಪಡೆಯದ, ಕವಿಕುಟುಂಬಗಳವರೇ ಖರ್ಚು-ವೆಚ್ಚ ಭರಿಸುತ್ತಿರುವ ಈ ಪತ್ರಿಕೆ ಕನ್ನಡ ಸಾರಸ್ವತ ಲೋಕಕ್ಕೆ ಕವಿಮನೆತನದವರ ಅಳಿಲು ಸೇವೆಯಾಗಿದೆ.  

'ಕವಿಕಿರಣ'ದ ಸಂಚಿಕೆಗಳನ್ನು ಇಲ್ಲಿಯೂ ಓದಬಹುದು:
   http://kavikirana.blogspot.in/  - ಇದು ಕವಿ ಪ್ರಕಾಶನದ ಪ್ರಕಟಣೆಗಳನ್ನು ಅಂತರ್ಜಾಲದ ಮೂಲಕವೂ ಜನರಿಗೆ ತಲುಪಿಸಲು ಉದ್ದೇಶಿಸಿರುವ ಬ್ಲಾಗ್.  ಈ ತಾಣದಲ್ಲಿ ಇದುವರೆಗೆ ಪ್ರಕಟಿಸಿದ ಪ್ರಕಟಣೆಗಳು:
1. 'ಕವಿಕಿರಣ' ಪತ್ರಿಕೆ ಮೂಡಿದ ಪರಿಯ ಪರಿಚಯ, 
     http://kavikirana.blogspot.in/2011/01/blog-post_26.html
2. 'ಕವಿಕಿರಣ' ಪತ್ರಿಕೆಯ ಡಿಸೆಂಬರ್, 2008ರ ಸಂಚಿಕೆ
     http://kavikirana.blogspot.in/2011/02/2008.html
3. 'ಕವಿಕಿರಣ' ಪತ್ರಿಕೆಯ ಜೂನ್, 2009ರ ಸಂಚಿಕೆ
     http://kavikirana.blogspot.in/2011/04/2009.html
4. 'ಕವಿಕಿರಣ' ಪತ್ರಿಕೆಯ ಡಿಸೆಂಬರ್, 2009ರ ಸಂಚಿಕೆ
     http://kavikirana.blogspot.in/2011/05/01-12-2009.html
5. 'ಕವಿಕಿರಣ' ಪತ್ರಿಕೆಯ ಜೂನ್, 2010ರ ಸಂಚಿಕೆ
    http://kavikirana.blogspot.in/2011/07/01-06-2010.html
6. 'ಕವಿಕಿರಣ' ಪತ್ರಿಕೆಯ ಜೂನ್, 2010ರ ವಿಶೇಷ ಸಂಚಿಕೆ
    http://kavikirana.blogspot.in/2011/07/01-06-2010.html
7.  ಕ.ವೆಂ. ನಾಗರಾಜರ ಕೃತಿ: ಕವಿ ಸುಬ್ರಹ್ಮಣ್ಯಯ್ಯ - ಒಂದು ಜೀವಗೀತೆ (ವ್ಯಕ್ತಿಚಿತ್ರಣ)  http://kavikirana.blogspot.in/2011/06/blog-post_23.html
8. ಕವಿ ವೆಂ. ಸುರೇಶರ  'Karmayogi – Kalavallabha S.K. LINGANNAIYA – a concise biography of Sri S.K. Lingannaiya'
     http://kavikirana.blogspot.in/2011/07/this-book-is-biography-of-one-of.html
      ಕಾಲಕ್ರಮೇಣ ಉಳಿದ ಪ್ರಕಟಣೆಗಳನ್ನೂ ಸಹೃದಯೀ ವಾಚಕರ ಮುಂದಿಡುವ ವಿಚಾರವಿದೆ. ಹೆಚ್ಚಿನ ಮಾಹಿತಿ ಅಗತ್ಯವಿದ್ದಲ್ಲಿ ನನ್ನನ್ನಾಗಲೀ, ಕವಿ ಸುರೇಶರನ್ನಾಗಲೀ ಸಂಪರ್ಕಿಸಬಹುದು. ತಮ್ಮ ಪ್ರತಿಕ್ರಿಯೆ, ಸಲಹೆ, ಸೂಚನೆ, ಸಹಕಾರಗಳಿಗೆ ಸ್ವಾಗತ.
-ಕ.ವೆಂ.ನಾಗರಾಜ್.

Friday, January 6, 2012

ನಮ್ಮ ಮನೆ

ದಿನಾಂಕ 25-12-2012ರಂದು ಹಾಸನದಲ್ಲಿ ನಡೆದ ಕವಿಮನೆತನದವರ ಮತ್ತು ಬಂಧು-ಬಳಗದವರ 6ನೆಯ ವಾರ್ಷಿಕ ಸಮಾವೇಶದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಪ್ರಚಾರಕರು ಮತ್ತು ಕುಟುಂಬ ಪ್ರಬೋಧನ್ ಸಂಸ್ಥೆಯ ಸಂಯೋಜಕರಾದ ಸನ್ಮಾನ್ಯ ಶ್ರೀ ಸು.ರಾಮಣ್ಣನವರು ನಮ್ಮ ಕುಟುಂಬ-ನಾವು-ನಮ್ಮವರು-ನಮ್ಮ ಮನೆ ಎಂಬ ವಿಷಯದ ಕುರಿತು ಸಂವಾದ ಕಾರ್ಯಕ್ರಮ ನಡೆಸಿಕೊಟ್ಟರು. ಆ ಸಂದರ್ಭದಲ್ಲಿ ಅವರು 'ನಮ್ಮ ಮನೆ' ಎಂಬ ಹಾಡನ್ನು ಹೇಳಿಕೊಟ್ಟು ಕಾರ್ಯಕ್ರಮಕ್ಕೆ ಬಂದಿದ್ದವರೆಲ್ಲರಿಗೂ ಹೇಳಿಸಿ ಕಾರ್ಯಕ್ರಮ ಪ್ರಾರಂಭಿಸಿದ್ದು ವಿಶೇಷವೆನಿಸಿತು. ಸಂವಾದದಲ್ಲಿ ಎಲ್ಲರೂ ಉತ್ಸಾಹದಿಂದ ಪಾಲುಗೊಂಡಿದ್ದರು. ಮಿತ್ರ ಹರಿಹರಪುರ ಶ್ರೀಧರರು ಹಾಡಿನ ಭಾಗದ ದೃಷ್ಯ-ಧ್ವನಿಗ್ರಹಣ ಮಾಡಿದ್ದು ಅದನ್ನು ನಿಮ್ಮ ಕೇಳುವಿಕೆಗಾಗಿ ಇಲ್ಲಿ ಪ್ರಸ್ತುತ ಪಡಿಸಿದೆ. ಹಾಡಿನ ಸಾಹಿತ್ಯವನ್ನೂ ಕೆಳಗೆ ಕೊಟ್ಟಿದೆ.
-ಕ.ವೆಂ.ನಾಗರಾಜ್.

ನಮ್ಮ ಮನೆ
ನಮ್ಮ ಮನೆ ಇದು ನಮ್ಮ ಮನೆ
ನಲಿವಿನ ಅರಿವಿನ ನಮ್ಮ ಮನೆ |
ರೀತಿಯ ನೀತಿಯ ಭದ್ರ ಬುನಾದಿಯ
ಮೇಲೆ ನಿಂತಿದೆ ನಮ್ಮ ಮನೆ || ಪ ||

ತಾಯಿಯ ಮಮತೆಯ ತಂದೆಯ ಪ್ರೀತಿಯ
ಸೆಲೆಯಲಿ ತೆರೆದಿದೆ ನಮ್ಮ ಮನೆ
ಅಜ್ಜಿಯ ಕಥೆಯ ಅಜ್ಜನ ಶಿಸ್ತಿನ
ನಿಲುವಲಿ ನಿಂತಿದೆ ನಮ್ಮ ಮನೆ || 1 ||

ಹಕ್ಕಿಗಳುಲಿವಿಗೆ ನೇಸರನುದಯಕೆ
ಏಳುವರೆಲ್ಲರು ಮುದದಿಂದ
ಮೀಯುತ ಮಡಿಯಲಿ ನೆನೆಯುತ ದೇವಗೆ
ಭಕುತಿಯ ನಮನ ಕರದಿಂದ || 2 ||

ಅಕ್ಕತಂಗಿಯರ ಅಣ್ಣತಮ್ಮದಿರ
ಕದನಕುತೂಹಲ ಮುದವಿರಲು
ಬೆಳೆಯುತ ನಾವು ಮುಂದಿನ ಪ್ರಜೆಗಳು
ದೇಶದ ಆಸ್ತಿಯು ನಾವೆನಲು || 3 ||

ಹಬ್ಬಹರಿದಿನದಿ ಮಾವುಬಾಳೆಯು
ಸಿಂಗರಿಸಿರಲು ಹಸಿರಿಂದ
ರಂಗವಲ್ಲಿಯ ಹೊಸ್ತಿಲದೀಪವು
ರುಚಿ ರುಚಿ ಅಡಿಗೆಯು ಘಮ್ಮೆಂದು || 4 ||

ಏಳುಬೀಳಿಗೆ ಕದಲದ ಮನವು
ಛಲದಲಿ ದುಡಿಯುವ ಕೈಗಳಿವು
ಬೀಳಿಗೆ ಆಸರೆ ಏಳ್ಗೆಗೆ ಹರಕೆ
ತುಂಬಿದ ಮನೆ ಮೇಲ್ ತಾಣವು || 5 ||

ಶಾಲೆಯು ಇದುವೆ ಬದುಕಿನ ಪಾಠಕೆ
ನಾಳೆಯ ಕನಸಿಗೆ ಕೇತನವು
ದೇಶವ ಕಟ್ಟುವ ಸಂಸ್ಕೃತಿ ಸಾರಕೆ
ಕೇಶವ ಕುಲದ ನಿಕೇತನವು || 6 ||



ನಮ್ಮ ಮನೆ: ಭಾಗ-1


ನಮ್ಮ ಮನೆ ಸಂವಾದ: ಭಾಗ-2

Thursday, January 5, 2012

ಸಾಧನಾ ಪಥದಲ್ಲಿ ಕೆಳದಿಕವಿಮನೆತನ

"ಹೆಗಲು ಹೆಗಲು ಹೆಜ್ಜೆ ಹೆಜ್ಜೆ ಜೋಡಿಗೂಡಿ ನಡೆಯುವಾ
  ಭಿನ್ನ ಭಾವ ಮರೆಯುವಾ ದೇಶಕಾಗಿ ದುಡಿಯುವಾ"
     ದಿನಾಂಕ 25-12-2011ರಂದು ಹಾಸನದಲ್ಲಿ ಕೆಳದಿ ಕವಿಮನೆತನದವರ ಹಾಗೂ ಅವರ ಬಂಧು-ಬಳಗದವರ 6ನೆಯ ವಾರ್ಷಿಕ ಸಮಾವೇಶ ಉದ್ದೇಶ ಸಾಧನೆಯಲ್ಲಿ ಯಶಸ್ಸು ಕಂಡಿತೆಂದರೆ ಉತ್ಪ್ರೇಕ್ಷೆಯಲ್ಲ. ಇಂದಿನ ವ್ಯವಸ್ಥೆಯಲ್ಲಿ 'ನಾವಾಯಿತು, ನಮ್ಮ ಸ್ವಂತ ಕುಟುಂಬದ ವಿಷಯವಾಯಿತು, ಇತರ ವಿಷಯಗಳಿಗೆ ಪುರುಸೊತ್ತಿಲ್ಲ' ಎನ್ನುವ ಮನಸ್ಥಿತಿಯವರೇ ಬಹಳವಿದ್ದಾಗ ಎಲ್ಲರನ್ನೂ ಜೊತೆಗೂಡಿಸಿ ಸಜ್ಜನಶಕ್ತಿಯ ಜಾಗರಣೆ ಮಾಡುವ ಮತ್ತು ಅದರಲ್ಲಿ ಪ್ರಗತಿ ಕಾಣುವ ಕೆಲಸ ಸುಲಭವೇನಲ್ಲ. ದೂರ ದೂರದ ಊರುಗಳಿಂದ ಬಂದಿದ್ದ 150 ಬಂಧುಗಳು ಅಂದು ಒಟ್ಟಿಗೆ ಸೇರಿ ಸಂಭ್ರಮಿಸಿದ ದಿನ. ಹಿರಿಯರಾದ ಶ್ರೀ ಸಾ.ಕ. ಕೃಷ್ಣಮೂರ್ತಿಯವರ ಆಶೀರ್ವಾದದೊಂದಿಗೆ ಸಂಚಾಲಕರುಗಳಾಗಿ ಹಾಸನದ ಶ್ರೀ ಕ.ವೆಂ. ನಾಗರಾಜ್ ಮತ್ತು ಶಿವಮೊಗ್ಗದ ಶ್ರೀ ಕವಿಸುರೇಶರ ಪ್ರಯತ್ನ, ಆಯೋಜಕರಾಗಿ ಶ್ರೀಮತಿ ಮತ್ತು ಶ್ರೀ ಕುಮಾರಸ್ವಾಮಿಯವರು ಕೈಜೋಡಿಸಿದುದು, ಮಿತ್ರ ಹರಿಹರಪುರ ಶ್ರೀಧರರ ನೆರವು, ಸ್ಪಂದಿಸಿದ ಬಂಧುವರ್ಗದಿಂದಾಗಿ ಭಾಗವಹಿಸಿದವರೆಲ್ಲರಿಗೆ ಸ್ಮರಣೀಯ ಸಮಾವೇಶವೆನಿದ್ದು ಸುಳ್ಳಲ್ಲ. ಸಮಾವೇಶದ ಸಂಕ್ಷಿಪ್ತ ನೋಟ ನಿಮಗಾಗಿ, ಇದೋ ಇಲ್ಲಿ!
     ಸಮಯಪಾಲನೆಗೆ ಮಹತ್ವ ನೀಡಿ ಸರಿಯಾಗಿ 10-00 ಘಂಟೆಗೆ ಕಾರ್ಯಕ್ರಮ ಆರಂಭಿಸಲಾಯಿತು. ಅದಕ್ಕೆ ಮುಂಚೆ ಬಂದಿದ್ದವರೆಲ್ಲರಿಗೆ ರುಚಿರುಚಿಯಾದ ಉಪಹಾರದ ವ್ಯವಸ್ಥೆಯಾಗಿತ್ತು. ವೇದಿಕೆಯಲ್ಲಿ ಮನೆತನದ ಅತ್ಯಂತ ಹಿರಿಯ ಸದಸ್ಯರಾದ ಬೆಂಗಳೂರಿನ ಶ್ರೀ ಸಾ.ಕ. ಕೃಷ್ಣಮೂರ್ತಿಯವರನ್ನು ಅಧ್ಯಕ್ಷರಾಗಿ, ಮುಖ್ಯ ಅತಿಥಿಯಾಗಿ ಹಾಸನದ ಶ್ರೀ ರಾಮಕೃಷ್ಣ ವಿದ್ಯಾಲಯ ಸಂಸ್ಥೆಗಳ ಸ್ಥಾಪಕ ಮುಖ್ಯಸ್ಥರು, ವಿಶೇಷ ಅತಿಥಿಯಾಗಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಪ್ರಚಾರಕರು ಮತ್ತು ಕುಟುಂಬ ಪ್ರಭೋದನ್ ಸಂಸ್ಥೆಯ ಸಂಯೋಜಕರಾದ ಶ್ರೀ ಸು. ರಾಮಣ್ಣನವರು ಮತ್ತು ಸಮಾವೇಶದ ಆಯೋಜಕ ದಂಪತಿಗಳಾದ ಶ್ರೀಮತಿ ಗಿರಿಜಾಂಬಾ ಮತ್ತು ಶ್ರೀ ಕುಮಾರಸ್ವಾಮಿಯವರುಗಳನ್ನು ಆಸೀನಗೊಳಿಸಲಾಯಿತು. ಕುಮಾರಿ ಸ್ಫೂರ್ತಿಆತ್ರೇಯಳ ಗಣೇಶ ಸ್ತುತಿ ನೃತ್ಯದೊಂದಿಗೆ ಶುಭಾರಂಭವಾದರೆ, ವೇದಿಕೆಯಲ್ಲಿದ್ದ ಗಣ್ಯರು ಜ್ಯೋತಿ ಬೆಳಗಿಸಿ ಸಮಾವೇಶದ ಉದ್ಘಾಟನೆ ಮಾಡಿದರು.
ವೇದಿಕೆಯಲ್ಲಿ: ಶ್ರೀ/ಶ್ರೀಮತಿ:  ಸಾ.ಕ.ಕೃಷ್ಣಮೂರ್ತಿ, ಸು.ರಾಮಣ್ಣ, ಸಿ.ಎಸ್.ಕೃಷ್ಣಸ್ವಾಮಿ, ಗಿರಿಜಾಂಬಾ, ಕುಮಾರಸ್ವಾಮಿ
ನಿರೂಪಕಿ: ಬಿಂದು ರಾಘವೇಂದ್ರ
ಸ್ಫೂರ್ತಿಆತ್ರೇಯಳಿಂದ ಗಣೇಶ ಸ್ತುತಿ ನೃತ್ಯ 
  ಕಳೆದ ವರ್ಷ ವಿಧಿವಶರಾದ ಬೆಂಗಳೂರಿನ ಅಡ್ವೋಕೇಟ್ ಶ್ರೀ ಬಿ.ಎನ್. ಲಕ್ಷ್ಮಣರಾವ್, ಹಾಸನ ತಾ. ನಿಟ್ಟೂರಿನ ನಿವೃತ್ತ ಉಪಾಧ್ಯಾಯ ಶ್ರೀ ರಾಮರಾವ್ ಮತ್ತು ಬೀರೂರಿನ ಶ್ರೀಮತಿ ವಿಮಲಮ್ಮಶೇಷಗಿರಿರಾವ್ ಇವರುಗಳ ಆತ್ಮಗಳಿಗೆ ಸದ್ಗತಿ ಕೋರಿ ಎರಡು ನಿಮಿಷಗಳ ಕಾಲ ಮೌನ ಶ್ರದ್ಧಾಂಜಲಿ ಅರ್ಪಿಸಲಾಯಿತು. ಹಾಸನದ ಶ್ರೀ ಬಿ.ಎನ್. ಸತ್ಯಪ್ರಸಾದರವರು ವೇದಿಕೆಯಲ್ಲಿದ್ದ ಗಣ್ಯರ ಪರಿಚಯ ಮಾಡಿಕೊಡುವುದರೊಂದಿಗೆ ಎಲ್ಲರನ್ನೂ ಸ್ವಾಗತಿಸಿದರು.

ಶ್ರೀ ಬಿ.ಎನ್.ಸತ್ಯಪ್ರಸಾದರಿಂದ ಸ್ವಾಗತ, ಪರಿಚಯ
        'ಕವಿಕಿರಣ' ಪತ್ರಿಕೆಯ ಸಂಪಾದಕ ಶ್ರೀ ಕ.ವೆಂ. ನಾಗರಾಜ್ ಪ್ರಾಸ್ತಾವಿಕ ನುಡಿಗಳನ್ನಾಡಿ ಸಮಾವೇಶಗಳ ಹಿನ್ನೆಲೆ, ಕಾರ್ಯಕ್ರಮಗಳ ಮಹತ್ವ, ಕವಿಕಿರಣ ಪತ್ರಿಕೆಯ ಧ್ಯೇಯೋದ್ದೇಶ, ಕವಿಪ್ರಕಾಶನದ ಪ್ರಕಟಣೆಗಳು, ಇತ್ಯಾದಿ ಸಂಗತಿಗಳ ಕುರಿತು ವಿವರಿಸಿ ಸಾಧನಾಪಥದಲ್ಲಿ ಮುನ್ನಡೆದು ಮನೆತನದ ಪರಂಪರೆಯನ್ನು ಉಳಿಸಿ ಬೆಳೆಸಲು ಕರೆ ನೀಡಿದರು.
ಶ್ರೀ ಕ.ವೆಂ.ನಾಗರಾಜರಿಂದ ಪ್ರಾಸ್ತಾವಿಕ ನುಡಿ

     "ನಮ್ಮ ಕುಟುಂಬ-ನಾವು-ನಮ್ಮವರು-ನಮ್ಮ ಮನೆ" ಎಂಬ ವಿಷಯದಲ್ಲಿ ಶ್ರೀ ಸು.ರಾಮಣ್ಣನವರು ನಡೆಸಿಕೊಟ್ಟ ಸಂವಾದ ಕಾರ್ಯಕ್ರಮ ಸಮಾವೇಶದ ಪ್ರಮುಖ ಅಂಗವಾಗಿತ್ತು ಮತ್ತು ಪ್ರಭಾವಿಯಾಗಿತ್ತು. ಒಂದು ಮಾದರಿ ಕುಟುಂಬ ಹೇಗಿರಬೇಕು ಎಂಬ ಬಗ್ಗೆ ಒಂದು ಹಾಡನ್ನು ಹೇಳಿಕೊಟ್ಟು ಎಲ್ಲರಿಂದಲೂ ಹೇಳಿಸುವುದರಿಂದ ಪ್ರಾರಂಭವಾದ ಸಂವಾದದಲ್ಲಿ ಎಲ್ಲರೂ ಉತ್ಸಾಹದಿಂದ ಪಾಲ್ಗೊಂಡರು, ಪ್ರೇರಣೆ ಪಡೆದರು. ಹೆಚ್ಚಿನವರಿಗೆ ಇದು ಒಂದು ವಿಭಿನ್ನ ಕಾರ್ಯಕ್ರಮವೆನಿಸಿದ್ದು, ಈ ಸಂವಾದ ನೀಡಿದ ಸಂದೇಶದ ಬಗ್ಗೆ ಮೆಚ್ಚುಗೆ ವ್ಯಕ್ತವಾಯಿತು.
ಸಂವಾದ ನಡೆಸುತ್ತಿರುವ ಶ್ರೀ ಸು.ರಾಮಣ್ಣನವರು
ಇವರುಗಳೂ ಸಂವಾದದಲ್ಲಿ ಭಾಗಿಗಳು
ಶ್ರೀ ಸು.ರಾಮಣ್ಣನವರಿಗೆ ಸನ್ಮಾನ
     ಕವಿಮನೆತನದ ಮೂಲಪುರುಷ ಲಿಂಗಣ್ಣಕವಿಯ ಐತಿಹಾಸಿಕ ಕಾವ್ಯ ಕೆಳದಿನೃಪ ವಿಜಯದ ಇಂಗ್ಲಿಷ್ ಗದ್ಯಾನುವಾದ Keladi Nrupa Vijaya’  ಅನ್ನು ಮುಖ್ಯ ಅತಿಥಿ ಶ್ರೀ ಕೃಷ್ಣಸ್ವಾಮಿಯವರು ಬಿಡುಗಡೆಗೊಳಿಸಿ ಈ ಕೃತಿ ಸಾರಸ್ವತ ಲೋಕಕ್ಕೆ ಒಳ್ಳೆಯ ಕೊಡುಗೆಯಾಗಿದೆ ಎಂದು ಶ್ಲಾಘಿಸಿದರು. ಕೃತಿ ಪರಿಚಯವನ್ನು ಸಾಗರದ ಶ್ರೀಮತಿ ಸುಮನಾವೆಂಕಟೇಶ ಜೋಯಿಸ್ ಮಾಡಿಕೊಟ್ಟರು. ಲೇಖಕ ಸುರೇಶರನ್ನು ಆತ್ಮೀಯವಾಗಿ ಸನ್ಮಾನಿಸಲಾಯಿತು. ಕವಿ ಸುರೇಶ್ ಮಾತನಾಡಿ ತಮಗೆ ಇದು ಸ್ಮರಣೀಯವಾಗಿದೆಯೆಂದು ತಿಳಿಸಿ, ಈ ಕೃತಿ ತಮ್ಮ ಜೀವಮಾನದಲ್ಲಿ ಮಾಡಿದ ನೆನಪಿಟ್ಟುಕೊಳ್ಳುವ ಕೆಲಸವಾಗಿದೆಯೆಂದರು. ಕವಿಕಿರಣದ ಡಿಸೆಂಬರ್, ೨೦೧೧ ರ ಸಂಚಿಕೆಯನ್ನೂ ಬಿಡುಗಡೆಗೊಳಿಸಿ ಬಂದವರೆಲ್ಲರಿಗೆ ವಿತರಿಸಲಾಯಿತು. ಕ.ವೆಂ.ನಾಗರಾಜರ ಚಿಂತನಶೀಲ ಮುಕ್ತಕಗಳಿರುವ ಪುಸ್ತಕ ಮೂಢ ಉವಾಚದ ಪ್ರತಿಗಳನ್ನೂ ಸಹ ಬಂಧುಗಳಿಗೆ ಉಚಿತವಾಗಿ ನೀಡಲಾಯಿತು.
ಕವಿಸುರೇಶರ ಆಂಗ್ಲಭಾಷೆಯ ಕೃತಿ 'ಕೆಳದಿನೃಪ ವಿಜಯ'ದ ಬಿಡುಗಡೆ
ಶ್ರೀಮತಿ ಸುಮನಾ ವೆಂಕಟೇಶಜೋಯಿಸರಿಂದ ಕೃತಿ ಪರಿಚಯ
ಲೇಖಕ ಕವಿಸುರೇಶರ ಮಾತು
ಲೇಖಕರಿಗೆ ಸನ್ಮಾನ
'ಕವಿಕಿರಣ'ದ ಡಿಸೆಂಬರ್ ಸಂಚಿಕೆ ಬಿಡುಗಡೆ
ಮುಖ್ಯ ಅತಿಥಿಗಳ ಮೆಚ್ಚುಗೆಯ ನುಡಿಗಳು
     ಹಿರಿಯರಾದ ಬೆಂಗಳೂರಿನ ಶ್ರೀಮತಿ ಸುಬ್ಬಲಕ್ಷ್ಮಮ್ಮಸುಬ್ಬರಾವ್, ಶಿವಮೊಗ್ಗದ ಶ್ರೀಮತಿ ಸೀತಾಲಕ್ಷ್ಮಮ್ಮಕೃಷ್ಣಮೂರ್ತಿ ಮತ್ತು ಕೆಳದಿಯ ಶ್ರೀ ಗುಂಡಾಜೋಯಿಸರನ್ನು ಅತ್ಯಂತ ಆತ್ಮೀಯವಾಗಿ ಸನ್ಮಾನಿಸಲಾಯಿತು. ಸನ್ಮಾನಿತರ ಪರವಾಗಿ ಮಾತನಾಡಿದ ಶ್ರೀ ಗುಂಡಾಜೋಯಿಸರು ಹೊರಗಿನವರ ಸನ್ಮಾನಕ್ಕಿಂತ ಬಂಧುಗಳು ಮಾಡಿದ ಸನ್ಮಾನ ತಮಗೆ ತುಂಬಾ ಸಂತೋಷ ನೀಡಿದೆಯೆಂದು ಕೃತಜ್ಞತೆ ಅರ್ಪಿಸಿದರು. ಶ್ರೀ ಕುಮಾರಸ್ವಾಮಿಯವರು ಮಾತನಾಡುತ್ತಾ ಭಾವುಕರಾಗಿದ್ದು ಸಮಾವೇಶದ ಯಶಸ್ಸು ಬಿಂಬಿಸಿತ್ತು. ಆಯೋಜಕರು, ಸಮಾವೇಶಕ್ಕೆ ಸಹಕರಿಸಿದವರನ್ನು ಗೌರವಿಸಲಾಯಿತು.
ಶ್ರೀಮತಿ ಸುಬ್ಬಲಕ್ಷ್ಮಮ್ಮಸುಬ್ಬರಾಯರನ್ನು ಸನ್ಮಾನಿಸಿದಾಗ ಸಂಭ್ರಮಿಸಿದ ಬಂಧುಗಳು
ಶ್ರೀಮತಿ ಸೀತಾಲಕ್ಷ್ಮಮ್ಮ ಕೃಷ್ಣಮೂರ್ತಿಯವರನ್ನು ಸನ್ಮಾನಿಸಿದಾಗ
ಶ್ರೀ ಕೆಳದಿ ಗುಂಡಾಜೋಯಿಸರನ್ನು ಸನ್ಮಾನಿಸಿದಾಗ ಹಿಗ್ಗಿದ ಕುಟುಂಬವರ್ಗ
ಸಮಾವೇಶದ ಅಯೋಜಕರ ಬಂಧುವರ್ಗದ ಸಂಭ್ರಮ
ಸಹಕಾರಿಗಳು ಶ್ರೀ ಹರಿಹರಪುರ ಶ್ರೀಧರ ದಂಪತಿಗಳಿಗೆ ಅಭಿನಂದನೆ
ಸಹಕಾರಿ ಶ್ರೀ ಪಾಂಡುರಂಗ, ಹಾಸನ ಇವರಿಗೆ ಅಭಿನಂದನೆ
     ಇದೇ ಸಂದರ್ಭದಲ್ಲಿ ಒಂದು ಪ್ರದರ್ಶಿನಿ ಏರ್ಪಡಿಸಿದ್ದು ಇದರಲ್ಲಿ ಕವಿಮನೆತನದವರು ರಚಿಸಿದ ಕಲಾಕೃತಿಗಳು, ವರ್ಣಚಿತ್ರಗಳು, ಪುಸ್ತಕಗಳು, ಭಾವಚಿತ್ರಗಳು ಇತ್ಯಾದಿಗಳನ್ನು ಪ್ರದರ್ಶಿಸಲಾಗಿದ್ದು ಇದು ಇತರರಿಗೂ ಸಹ ಏನನ್ನಾದರೂ ಮಾಡಲು ಪ್ರೇರೇಪಿಸಲು ಸಹಕಾರಿಯಾಯಿತು ಎಂಬುದರಲ್ಲಿ ಅನುಮಾನವಿಲ್ಲ. ಅದರಲ್ಲೂ ಶ್ರೀ ಸಾ.ಕ.ಕೃಷ್ಣಮೂರ್ತಿಯವರು ಚಿತ್ರಗಳನ್ನು ಪ್ಲೈವುಡ್ ಮೇಲೆ ಅಂಟಿಸಿ ಕಲಾರಚನೆಗೆ ಅನುಗುಣವಾಗಿ ಕತ್ತರಿಸಿ ಸಿದ್ಧಪಡಿಸಿದ ಕೃತಿಗಳು ಗಮನ ಸೆಳೆದವು.
 ಪ್ರದರ್ಶಿನಿಯ ಕೆಲವು ದೃಷ್ಯಗಳು


     ಬೆಂಗಳೂರಿನ ಶ್ರೀಮತಿ ಸುಮಾರಾಜೇಶ್, ಕುಮಾರಿಯರಾದ ಸ್ಫೂರ್ತಿಆತ್ರೇಯ ಮತ್ತು ಲಕ್ಷ್ಮಿಶ್ರೀಭಾರದ್ವಾಜರವರುಗಳಿಂದ ನಡೆದ ಭರತನಾಟ್ಯ ಕಾರ್ಯಕ್ರಮ ಕಲಾರಸಿಕರಿಗೆ ಮನದಣಿಸುವಲ್ಲಿ ಯಶಸ್ವಿಯಾಯಿತು. ಶ್ರೀಮತಿ ಸುಮಾರಾಜೇಶರು ಬೆಂಗಳೂರಿನಲ್ಲಿ ಸ್ಫೂರ್ತಿ ನಾಟ್ಯಶಾಲೆ ನಡೆಸುತ್ತಿದ್ದು ಹೆಸರಾಂತ ಕಲಾವಿದೆಯಾಗಿದ್ದಾರೆ. ಕುಮಾರಿ ಪಲ್ಲವಿ ಸತ್ಯಪ್ರಸಾದರ ಹಾಡುಗಾರಿಕೆ ಕೇಳುಗರಿಗೆ ಹಿತವಾದ ಅನುಭವ ನೀಡಿತು. ಪುಟಾಣಿ ಅಕ್ಷಯಳ ಏಕಪಾತ್ರಾಭಿನಯ. ಅನಘನ ಭಗವದ್ಗೀತಾ ಪಠಣ, ಕು. ಕವನ ಸಂಗಡಿಗರಿಂದ ಡ್ಯಾನ್ಸ್, ಶ್ರೀ ಲಕ್ಷ್ಮೀಶರ ಹಾಡು, ಡಾ. ಬಿ.ಎಸ್.ಆರ್. ದೀಪಕ್‌ರ ಸಂಗೀತ, ಅನೇಕ ಬಂಧುಗಳು, ವಿಶೇಷವಾಗಿ ಪುಟಾಣಿಗಳು ನಡೆಸಿಕೊಟ್ಟ ವಿವಿಧ ಮನರಂಜನಾ ಕಾರ್ಯಕ್ರಮ ಎಲ್ಲರನ್ನೂ ರಂಜಿಸಿದವು. ಶ್ರೀಮತಿ ಬಿಂದುರಾಘವೇಂದ್ರರವರ ಕಾರ್ಯಕ್ರಮದ ನಿರೂಪಣೆ ಮತ್ತು ನಿರ್ವಹಣೆ ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು. ಮಧ್ಯಾಹ್ನದ ಭೋಜನಾನಂತರ ಸಹ ಮನರಂಜನೆ ಕಾರ್ಯಕ್ರಮಗಳು ಮುಂದುವರೆದವು. ವಂದನೆ, ಅಭಿನಂದನೆಗಳೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಾಗ ಎಲ್ಲರೂ ಸ್ಮರಣೀಯ ನೆನಪುಗಳೊಂದಿಗೆ ತಮ್ಮ ತಮ್ಮ ಊರುಗಳಿಗೆ ತೆರಳಿದರೆ ಸಮಾವೇಶಕ್ಕಾಗಿ ಶ್ರಮಿಸಿದವರಲ್ಲಿ ಸಮಾವೇಶ ಸಫಲಗೊಂಡ ಬಗ್ಗೆ ಸಾರ್ಥಕಭಾವ ಮೂಡಿತ್ತು.
ಸ್ಫೂರ್ತಿ ಆತ್ರೇಯ
 ಸುಮಾ ರಾಜೇಶ್


ಲಕ್ಷ್ಮಿಶ್ರೀ ಭಾರದ್ವಾಜ್
ಪಲ್ಲವಿ ಸತ್ಯಪ್ರಸಾದರಿಂದ ಸುಮಧುರ ಹಾಡುಗಳು
ಅಕ್ಷಯ, ಓರ್ವ  ಪುಟಾಣಿ, ಅನಘ, ಡಾ. ದೀಪಕ್.
ಅಂಬಿಕಾ, ಗೋಪಾಲಕೃಷ್ಣ, ಅಕ್ಷಯ, ಲಕ್ಷ್ಮೀಶ



ಇವರುಗಳೇ ಸಕ್ರಿಯರಾಗಿ ಪಾಲುಗೊಂಡು ಸಮಾವೇಶವನ್ನು ಸಾರ್ಥಕಗೊಳಿಸಿದವರು
************
ಸಮಾವೇಶಕ್ಕೆ ಸಂಬಂಧಿಸಿದ ಇನ್ನಷ್ಟು ಚಿತ್ರಗಳು




ಕವಿಸುರೇಶರ ಆಂಗ್ಲಭಾಷೆಯ ಕೃತಿ 'ಕೆಳದಿನೃಪ ವಿಜಯ'ದ ಬಿಡುಗಡೆ
ಲೇಖಕ ಕವಿಸುರೇಶರಿಗೆ ಸನ್ಮಾನ
ಸನ್ಮಾನಿತರ ಪರವಾಗಿ ಶ್ರೀ ಕೆಳದಿ ಗುಂಡಾಜೋಯಿಸರ ಅನಿಸಿಕೆ
ಸಹಕಾರಿ ಶ್ರೀ ಪಾಂಡುರಂಗರವರಿಗೆ ಅಭಿನಂದನೆ


ಸಹಕಾರಿಗಳು ಶ್ರೀ ಹರಿಹರಪುರ ಶ್ರೀಧರ ದಂಪತಿಗಳನ್ನು ಅಭಿನಂದಿಸಿದಾಗ